
ಬೆಂಗಳೂರು: ಶಿಗ್ಗಾಂವಿ ನವ ನಿರ್ವಾಚಿತ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದವನ್ನು ಅರ್ಪಿಸಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು. ಸಚಿವರಾದ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಶಿವಣ್ಣ ಮತ್ತು ನರೇಂದ್ರಸ್ವಾಮಿ, ಶ್ರೀನಿವಾಸ್ ಮಾನೆ, ಹೆಸ್ಕಾಂ ಅಧ್ಯಕ್ಷರಾದ ಮಾಜಿ ಶಾಸಕ ಅಜೀಮ್ ಪೀರ್ ಖಾದ್ರಿ ಇತರರು ಉಪಸ್ಥಿತರಿದ್ದರು