
ದಾವಣಗೆರೆ : (ಅಜ್ಗರ್ ಬಾಷಾ) 29-01-2025 ರ ಬುಧವಾರ ದಂದು ಸಂಜೆ ದಾವಣಗೆರೆ ತಾ. ಹಿಂಡಸಕಟ್ಟೆಯಿಂದ ಕ್ಯಾತನಹಳ್ಳಿ ಕಡೆಗೆ ಹೋಗುವ ಮಾರ್ಗ ಮದ್ಯದಲ್ಲಿ ಇಸ್ಫೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸಿ.ಇ.ಎನ್.ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ರವರಾದ ಶ್ರೀಮತಿ ಪದ್ಮಶ್ರೀ ಗುಂಜಿಕರ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಸುನೀಲ್ ಬಿ ತೇಲಿ ಹಾಗೂ ಸಿಬ್ಬಂದಿಗಳಾದ ಪ್ರಕಾಶ್, ಸುರೇಶ್, ಗೋವಿಂದರಾಜು, ಮುತ್ತುರಾಜು, ಬುಡೇನ್ ವಲಿ, ಲೋಹಿತ್, ಮಲ್ಲಿಕಾರ್ಜುನ, ಶಿವಕುಮಾರ, ಅಂಜಿನಪ್ಪ ರವರನ್ನು ಒಳಗೊಂಡ ತಂಡ. ಇಸ್ಪೇಟ್ ಅಡ್ಡೆ ಮೇಲೆ ದಾಳಿ ನಡೆಸಿ ಇಸ್ಫೀಟ್ ಜೂಜಾಟದಲ್ಲಿ ತೊಡಗಿದ್ದ 13 ಆರೋಪಿತರನ್ನು ವಶಕ್ಕೆ ಪಡೆದು ಆರೋಪಿತರಿಂದ ಇಸ್ಫೀಟ್ ಜೂಜಾಟದಲ್ಲಿ ತೊಡಗಿಸಿದ್ದ 2,05,000/- ನಗದು ಹಣವನ್ನು & ಇಸ್ಫೀಟ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದು 13 ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಲಂ 87 ಕೆ.ಪಿ. ಆಕ್ಟ್ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ